Oneindia Mobile
New Videos here on ur Mozilla -Get them!
ಮತಾಂತರ,ಭಜರಂಗದಳ ದಾಳಿ
ಬುಧವಾರ, ನವೆಂಬರ್ 4, 2009, 10:51 [IST]

ಮಂಗಳೂರು ನ 4: ನಗರದ ಅತ್ತಾವರ ಕೆಎಂಸಿ ಆಸ್ಪತ್ರೆ ಬಳಿ ಇರುವ ಪಿ ಸಿ ಕೋರ್ಟ್ ಅಪಾರ್ಟ್ಮೆಂಟ್ ನಲ್ಲಿ ಮತಾಂತರ ನಡೆಯುತ್ತಿದೆ ಎಂಬ ಆರೋಪದ ಮೇಲೆ ಮಂಗಳವಾರ (ನ.3) ರಾತ್ರಿ ಭಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. 20ಕ್ಕೂ ಹೆಚ್ಚು ಕಾರ್ಯಕರ್ತರು ದಾಳಿ ನಡೆಸಿ ಆಶಾಲತಾ ಮತ್ತು ಇಪ್ಸನ್ ಎಂಬವರು ಗುಪ್ತವಾಗಿ ಮತಾಂತರ ನಡೆಸುತ್ತಿದ್ದಾರೆಂದು ಆರೋಪಿಸಿದ್ದಾರೆ.

ಆಶಾಲತಾ ಎನ್ನುವವರು ಕೆಎಂಸಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದು ತಮಗೆ ಪರಿಚಯವಾದವರನ್ನು ಮನೆಗೆ ಕರೆದುಕೊಂಡು ಬಂದು ಮತಾಂತರಕ್ಕೆ ಪ್ರೇರಣೆ ನೀಡುತ್ತಿದ್ದಾರೆಂದು ಆರೋಪಿಸಲಾಗಿದೆ. 'ನಮ್ಮ ದೇವರನ್ನು ನಂಬಿದರೆ ನಿಮಗೆ ಒಳ್ಳೆದಾಗುತ್ತದೆ' ಎಂದು ಅಮಾಯಕರನ್ನು ಪುಸಲಾಯಿಸಿ ಮತಾಂತರ ನಡೆಸುತ್ತಿದ್ದಾರೆಂದು ಭಜರಂಗದಳದ ಕಾರ್ಯಕರ್ತರು ಆರೋಪಿಸಿದ್ದಾರೆ. ಮಾಹಿತಿ ತಿಳಿದ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನೂ ವಶಕ್ಕೆ ತೆಗೆದುಕೊಂಡಿದ್ದಾರೆ.


(ಏಜೆನ್ಸೀಸ್)



»Home »News  »Entertainment  »Currency  »Free Classifieds  »Cricket  »TV Schedules  »In Theatres  »Weather  »Languages  »Horoscope 

© Greynium Information Technologies Pvt. Ltd.